ಬೆಂಗಳೂರು: ನೊರೆ ಮತ್ತು ಬೆಂಕಿಯಿಂದ ಕುಖ್ಯಾತಿ ಪಡೆದಿರುವ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಪ್ರಸಕ್ತ ವರ್ಷದಲ್ಲಿ 42 ಕೋಟಿ ರೂ. ವೆಚ್ಚದಲ್ಲಿ 10 ಕೆರೆಗಳ ಸಮಗ್ರ ಅಭಿವೃದ್ಧಿಯನ್ನು ಬಿಡಿಎ ಮಾಡಲಿದೆ. ಬೆಳ್ಳಂದೂರು ಮತ್ತು ವರ್ತೂರು ಕೆರೆ ಸಮಗ್ರ ಅಭಿವೃದ್ಧಿಯೂ ಇದರಲ್ಲಿ ಸೇರಿದೆ. ಈ ಎರಡೂ ಕೆರೆ ಕಲುಷಿತಗೊಂಡಿರುವುದು, ನೊರೆ ಉಕ್ಕುತ್ತಿರುವ ಕಾರಣಕ್ಕೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿತ್ತು. ಬೆಳ್ಳಂದೂರು ಕೆರೆಯಲ್ಲಿ ಇತ್ತೀಚೆಗೆ ಬೆಂಕಿ ಕಾಣಿಸಿಕೊಂಡಿದ್ದು, ಮತ್ತೆ ಚರ್ಚೆಗೆ ಆಸ್ಪದವಾಗಿತ್ತು. ಕಾಲಮಿತಿ ಅಗತ್ಯ: ''ಕೆರೆಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಿರುವುದು ಸ್ವಾಗತಾರ್ಹ. ಇದಕ್ಕಾಗಿ ಕಾರ್ಯಪಡೆ ರಚಿಸಿ ಕಾಲಮಿತಿ ನಿಗದಿಪಡಿಸಿದರೆ ಉತ್ತಮ. ನೀರಿನಲ್ಲಿ ಫಾಸ್ಪರಸ್ ಅಂಶ ಹೆಚ್ಚಾಗಿರುವುದರಿಂದ ಮಳೆ ಬಂದಾಗಲೆಲ್ಲ ಕೆರೆಗಳ ನೊರೆ ಆಸುಪಾಸಿನ ಪ್ರದೇಶಗಳಲ್ಲಿ ಹರಡಿ ಅವಾಂತರ ಸೃಷ್ಟಿಯಾಗುತ್ತಿದೆ. ಕೂಡಲೇ ಹೂಳು ತೆಗೆದು ನೀರನ್ನು ಸ್ವಚ್ಛಗೊಳಿಸಬೇಕು ಎಂದು ಸರಕಾರಕ್ಕೆ ಸಲಹೆ ನೀಡಲಾಗಿದೆ,'' ಎಂದು ಐಐಎಸ್ಸಿ ವಿಜ್ಞಾನಿ ಡಾ.ಟಿ.ವಿ.ರಾಮಚಂದ್ರ ಹೇಳಿದರು. ಇವರು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ 8 ತಿಂಗಳ ಹಿಂದೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು. (ರಾಮಚಂದ್ರ ಅವರ ಫೋಟೊ ಬಳಸಿ) * 42 ಕೋಟಿ ರೂ.
↧
ಬೆಳ್ಳಂದೂರು, ವರ್ತೂರು ಕೆರೆ ಅಭಿವೃದ್ಧಿ
↧