Quantcast
Channel: VijayKarnataka
Viewing all articles
Browse latest Browse all 6795

ಅಂಚೆ ಇಲಾಖೆ ನೌಕರರ ಮುಷ್ಕರ

$
0
0

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಚೆ ಇಲಾಖೆ ನೌಕರರು ಗುರುವಾರ ಮುಷ್ಕರ ನಡೆಸಿದರು.

ಬೆಂಗಳೂರಿನ ಕೇಂದ್ರ ಕಚೇರಿ ಜಿಪಿಓ ಸೇರಿದಂತೆ ವಿವಿಧ ಅಂಚೆ ಕಚೇರಿಗಳಲ್ಲಿ ಬಹುತೇಕ ನೌಕರರು ಗೈರಾಗಿದ್ದರು. ಕೆಲವೆಡೆ ಕಚೇರಿಗೆ ಬೀಗ ಹಾಕಲಾಗಿತ್ತು.

ಈ ಕುರಿತು ಮಾತನಾಡಿದ ಸರಕಾರ ನೌಕರರ ಸಮನ್ವಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಎಸ್‌.ಪ್ರಸಾದ್‌ ಅವರು, ''7ನೇ ವೇತನ ಆಯೋಗದ ಅನ್ವಯ ಶೇ.14ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಅದನ್ನು ಶೇ.30ಕ್ಕೆ ಹೆಚ್ಚಿಸಬೇಕು. ಅವಧಿಗಿಂತ ಹೆಚ್ಚು ಕೆಲಸ ಮಾಡಿದರೆ ಗಂಟೆಗೆ ಕೇವಲ 15 ರೂ. ನೀಡಲಾಗುತ್ತದೆ. ಅದನ್ನು 200 ರೂ.ಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ 17 ಬೇಡಿಕೆ ಈಡೇರಿಸಬೇಕು,'' ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

''ಮುಷ್ಕರ ಹಮ್ಮಿಕೊಳ್ಳುವ ಕುರಿತು ಮೂರು ತಿಂಗಳ ಹಿಂದೆಯೇ ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಮಾತುಕತೆಗೂ ಆಹ್ವಾನಿಸಲಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ನಂತರ ಕಚೇರಿ ಬೀಗ ಹಾಕಿ ಮುಷ್ಕರ ನಡೆಸಲಾಯಿತು. ಇದರಿಂದ ಸರಕಾರಕ್ಕೆ ನಷ್ಟವಾಗಿದೆ. ಆದರೂ ಈ ಕುರಿತು ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಪ್ರತಿಭಟನಾಕಾರರನ್ನು ಯಾರೂ ಸಂಪರ್ಕಿಸಿಲ್ಲ,'' ಎಂದು ಮಾಹಿತಿ ನೀಡಿದರು.



Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!