Quantcast
Channel: VijayKarnataka
Viewing all articles
Browse latest Browse all 6795

ಕಾಂಗ್ರೆಸ್ ಸಂಸದರು ಸ್ವಾರ್ಥಿಗಳು: ಸ್ಪೀಕರ್ ಕೆಂಡ

$
0
0

ಹೊಸದಿಲ್ಲಿ: 'ಸಂಸತ್ ಕಲಾಪಕ್ಕೆ ನಿರಂತರ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಸಂಸದರಿಗೆ ರಾಷ್ಟ್ರೀಯ ಹಿತಾಸಕ್ತಿ ಬಗ್ಗೆ ಕಾಳಜಿಯೇ ಇಲ್ಲ. ಅವರು ಪರಮಸ್ವಾರ್ಥಿಗಳು,' ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಕೆಂಡ ಕಾರಿದ್ದಾರೆ.

ಡಿಡಿಸಿಎ ಹಗರಣ ಸಂಬಂಧ ಜೇಟ್ಲಿ ರಾಜೀನಾಮೆಗೆ ಆಗ್ರಹಿಸಿ ತಮ್ಮ ಮುಂದಿನ ಅಂಗಣದಲ್ಲಿ ಗಲಾಟೆ ನಡೆಸುತ್ತಿದ್ದ ಕಾಂಗ್ರೆಸ್ ಸದಸ್ಯರನ್ನು ಮನವೊಲಿಸಲು ಸೋತ ಸ್ಪೀಕರ್ ಕೆಂಡವಾದರು. ಸದಸ್ಯರ ಗದ್ದಲದಲ್ಲಿ ದೇಶದ ಹಿತಾಸಕ್ತಿ ಬಲಿಯಾಗುತ್ತಿದೆ. ದೇಶದ ರಕ್ಷಣೆಗೆ ಸಂಬಂಧಿಸಿದ ಮಹತ್ವದ ವಿಷಯ ಕುರಿತು ಚರ್ಚಿಸಬೇಕಿದೆ. ಕಾಂಗ್ರೆಸ್ ಸದಸ್ಯರ ಮನವೊಲಿಸಿ ವಾಪಸ್ ಕಳಿಸಿ ಎಂದು ಬಿಜೆಡಿ ಸದಸ್ಯರ ಬೈಜಯಂತ್ ಪಾಂಡಾ ಮನವಿ ಮಾಡಿದರು. ಆಗ ಪ್ರಶ್ನೋತ್ತರ ಕಲಾಪ ನಡೆಯುತ್ತಿತ್ತು. ಎಷ್ಟೇ ಮನವೊಲಿಸಿದರೂ ಕಿವಿಗೆ ಹಾಕಿಕೊಳ್ಳದ ಕಾಂಗ್ರೆಸ್ ಸದಸ್ಯರ ವರ್ತನೆಗೆ ಬಗ್ಗೆ ಬೇಸತ್ತ ಸ್ಪೀಕರ್ ಮೇಲಿನಂತೆ ಗುಡುಗಿದರು. ಗಲಾಟೆಯಲ್ಲಿ ತೊಡಗಿರುವ ಪ್ರತಿಯೊಬ್ಬ ಸದಸ್ಯರ ಹೆಸರು ಬರೆದು ತಮಗೆ ಕೊಡುವಂತೆ ಲೋಕಸಭೆ ಅಧಿಕಾರಿಗಳಿಗೆ ಅವರು ಸೂಚಿಸಿದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>