Quantcast
Channel: VijayKarnataka
Viewing all articles
Browse latest Browse all 6795

ಸ್ಯಾಂಡಲ್‌ವುಡ್‌ನ ನವ ತಾರೆಯರು

$
0
0

ಕನ್ನಡ ಸಿನಿ ರಂಗಕ್ಕೆ ಹೊಸ ಕಲಾವಿದರ ಸೇರ್ಪಡೆ ಆಗುತ್ತಲೇ ಇದೆ. ಬಿ.ಸುರೇಶ ನಿರ್ದೇಶನದ ದೇವರ ನಾಡಲ್ಲಿ ಚಿತ್ರದ ಮೂಲಕ ಇನ್ನಿಬ್ಬರು ನಟರು ಸ್ಯಾಂಡಲ್‌ವುಡ್‌ಗೆ ಪರಿಚಯ ಆಗುತ್ತಿದ್ದಾರೆ. ವಿಶೇಷತೆ ಅಂದರೆ, ಅವರಿಬ್ಬರೂ ಜನಪ್ರಿಯ ಕಲಾವಿದರ ಮಕ್ಕಳು ಅನ್ನುವುದು.

ಮಂಡ್ಯ ರಮೇಶ್ ಪುತ್ರಿ ದಿಶಾ ಮತ್ತು ಮಂಜುನಾಥ್ ಹೆಗಡೆ ಪುತ್ರ ಮನು ಸುರೇಶ ನಿರ್ದೇಶನದ ಚಿತ್ರದಲ್ಲಿ ನಾಯಕಿ ಮತ್ತು ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಹೆಸರಾಂತ ನಟನಾ ಸಂಸ್ಥೆಗಳಲ್ಲಿ ತರಬೇತಿ ಪಡೆದವರು.

'ದೇವರು ನಾಡಲ್ಲಿ ಕತೆ ಅಪರೂಪವಾಗಿದ್ದು. ಈ ಚಿತ್ರಕ್ಕೆ ಹೊಸ ಕಲಾವಿದರೇ ಬೇಕಿತ್ತು. ಹಾಗಂತ ದಿಶಾ ಮತ್ತು ಮನು ಹೊಸ ಕಲಾವಿದರು ಅನಿಸುವುದೇ ಇಲ್ಲ. ನಟನೆಗೆ ಬೇಕಿರುವ ತರಬೇತಿ ಪಡೆದು ಬಂದವರು. ಅಲ್ಲದೇ ಅವರಿಗೆ ಕತೆಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಇದೆ. ಹೀಗಾಗಿ ಆಯ್ಕೆ ಮಾಡಿಕೊಂಡೆ' ಅನ್ನುವುದು ಸುರೇಶ ಮಾತು. ಈಗಾಗಲೇ ಅನೇಕ ಹೊಸ ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದ ಕೀರ್ತಿ ಇವರದ್ದು.

ಸಿನಿಮಾದಲ್ಲಿ ಹಲವು ವಿಶೇಷತೆಗಳಿವೆ. ಪ್ರಕಾಶ್ ರೈ, ಸಿಹಿಕಹಿ ಚಂದ್ರು, ಅಚ್ಯುತ್‌ಕುಮಾರ್ ಸೇರಿದಂತೆ ಬಹುದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಈ ಸಿನಿಮಾದ ಮೂಲಕ ಅದ್ವೈತ ಸಿನಿಮಾಟೋಗ್ರಾಫರ್ ಕೂಡ ಸಿನಿ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.

ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಸದ್ಯ ಬಿಡುಗಡೆ ಆಗುವ ಸಿನಿಮಾದ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>