Quantcast
Channel: VijayKarnataka
Viewing all articles
Browse latest Browse all 6795

ಉ.ಪ್ರದೇಶದ ಕಾಲೇಜಿನಲ್ಲಿ ಸಚಿನ್ ಪುತ್ರನ ಭಾವಚಿತ್ರ!

$
0
0

ಹೊಸದಿಲ್ಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು ಮತ್ತೊಬ್ಬ ವಿದ್ಯಾರ್ಥಿಯ ಪ್ರವೇಶ ಪತ್ರದಲ್ಲಿ ಪ್ರಕಟಿಸುವ ಮೂಲಕ ಉತ್ತರ ಪ್ರದೇಶ ಶಿಕ್ಷಣ ಮಂಡಳಿ ಎಡವಟ್ಟು ಮಾಡಿದೆ.

ಆಗ್ರಾದ ಅಂಕುರ್ ಎಂಬ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರವೇಶ ಪತ್ರ ಸಂಖ್ಯೆ 0025488ರಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಭಾವಚಿತ್ರವಿದ್ದು ಜನ್ಮ ದಿನಾಂಕವನ್ನು 10/06/1996 ಎಂದು ನಮೂದಿಸಲಾಗಿದೆ. ಅಸಲಿಗೆ ಈ ಪ್ರವೇಶ ಪತ್ರ ಅರ್ಜುನ್ ಸಿಂಗ್ ಎಂಬ ವಿದ್ಯಾರ್ಥಿಯದ್ದಾಗಿದೆ. ಆದರೆ ಶಿಕ್ಷಣ ಮಂಡಳಿಯ ಎಡವಟ್ಟಿನಿಂದ ಈ ಅಚಾತುರ್ಯ ನಡೆದಿದೆ.

ಆದರೆ ಇದು ಉತ್ತರ ಪ್ರದೇಶದ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಒಂದು ನಿದರ್ಶನವಷ್ಟೇ ಎಂದು ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

''ಒಬ್ಬರ ಪ್ರವೇಶ ಪತ್ರಗಳಿಗೆ ಮತ್ತೊಬ್ಬರ ಭಾವಚಿತ್ರ ಅಂಟಿಸುವುದು ಇಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಈ ಮೂಲಕ ಪರೀಕ್ಷೆಗಳ ಸಂದರ್ಭದಲ್ಲಿ ಅಸಲಿ ವಿದ್ಯಾರ್ಥಿಯ ಬದಲಿಗೆ ನಕಲಿ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಉಗ್ರ ಹಫೀಜ್ ಸಯೀದ್ ಭಾವಚಿತ್ರವನ್ನು ಅಂಟಿಸಿದರೂ ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ,'' ಎಂದು ಅವರು ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>