Quantcast
Channel: VijayKarnataka
Viewing all articles
Browse latest Browse all 6795

ಆನೆಯ ರೌದ್ರಾವತಾರಕ್ಕೆ ವಾಹನಗಳು ಪುಡಿ

$
0
0

ಪಾಲಕ್ಕಾಡ್: ಸಾಕಾನೆಯೊಂದು ಇದ್ದಕ್ಕಿದ್ದಂತೆ ಮದವೇರಿದ ಮದ್ದಾನೆಯಂತೆ ದಾಳಿ ನಡೆಸಿ ಜನರನ್ನು ಭೀತಿಗೊಳಿಸಿದ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ.

ಮಾವುತ ಬೆನ್ನ ಮೇಲಿದ್ದಾಗಲ್ಲೇ, ಗಜರಾಯ ತೋರಿದ ರೌದ್ರಾವತಾರಕ್ಕೆ ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಪಾಲಕ್ಕಾಡ್‌ನ ರಸ್ತೆಯೊಂದರಲ್ಲಿ ಶಾಂತವಾಗಿಯೇ ಬರುತ್ತಿದ್ದ ಆನೆಗೆ ಅದೇನಾಯಿತೋ ಏನೋ ಇದ್ದಕ್ಕಿದ್ದಂತೆ ತಾಳ್ಮೆ ಕಳೆದುಕೊಂಡು ತನ್ನ ಸೊಂಡಿಲು ಬೀಸಿ ಬೈಕ್, ಆಟೊ ರಿಕ್ಷಾಗಳನ್ನು ಪುಡಿಗಟ್ಟಿಸಿತು. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು. ಜನ ದಿಕ್ಕಾಪಾಲಾಗಿ ಓಡತೋಡಗಿದರು. ಅದೃಷ್ಟವಶಾತ್ ಜೀವಹಾನಿ ಸಂಭವಿಸಿಲ್ಲ.

ಮಾವುತ ಆನೆಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ. ನಂತರ ಅದೇ ಶಾಂತವಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆನೆ ಒಮ್ಮೆಲೆ ಈ ರೀತಿ ಉಗ್ರಾವತಾರ ತಾಳಲು ಕಾರಣವೇನೆಂಬುದು ತಿಳಿದುಬಂದಿಲ್ಲ .


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ


BIG NEWS : ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ಯಿಂದ...


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>